ಆಕ್ರಮ- ಸಕ್ರಮ ಭೂಮಿ ಉಳುಮೆ ಮಾಡುತ್ತಿರುವವರಿಗೆ ಸಿಹಿ‌ ಸುದ್ದಿ , ಸಚಿವ ಅಶೋಕ್ ಹೇಳಿದ್ದೇನು.

 

 

 

 

ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮೂನೆ-50, ನಮೂನೆ -57ರಡಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಕಲಂ 94 ಸಿ ಹಾಗೂ 94ಸಿಸಿ ಅಡಿ ನೀಡಿದ ಹಕ್ಕುಪತ್ರಗಳ ನೋಂದಣಿಗೆ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

 

 

ಗೋಮಾಳ, ಇತರೆ ಭೂಮಿಗೆ ಸಂಬಂಧಿಸಿದಂತೆ ಈ ಹಿಂದಿನ ನಿಯಮ ಬದಲಿಸಿ, ಕಠಿಣ ನಿಯಮ ಜಾರಿಗೊಳಿಸಲಾಗುವುದು.ಸರ್ಕಾರಿ ಜಮೀನು ಅರ್ಹರಿಗೆ ಸಿಗಬೇಕು ಎಂದು ತಿಳಿಸಿದ್ದಾರೆ.

 

[t4b-ticker]

You May Also Like

More From Author

+ There are no comments

Add yours