ಉಪ ನೋಂದಣಿ ಕಚೇರಿಯಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಸರ್ಕಾರ ಆದೇಶ

 

 

 

 

ಬೆಂಗಳೂರು: ಉಪ ನೋಂದಣಿ ಕಚೇರಿಯಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

 

 

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿದೆ. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

[t4b-ticker]

You May Also Like

More From Author

+ There are no comments

Add yours