ಕೇಂದ್ರ ಸರ್ಕಾರ ಅವೈಜ್ಞಾನಿಕ ಕಾಯ್ದೆ ಮುಖಾಂತರ ರೈತರ ಬದುಕು ನಾಶಕ್ಕೆ ನಿಂತಿದೆ: ಶಾಸಕ ಟಿ.ರಘುಮೂರ್ತಿ

 

 

 

 

ವರದಿ: ಚಳ್ಳಕೆರೆ ವೀರೇಶ್.

 

 

ಚಳ್ಳಕೆರೆ-  ಕೇಂದ್ರ ಸರ್ಕಾರ ರೈತ ಸಮುದಾಯಕ್ಕೆ ಸರಿಯಾದ ಮಾಹಿತಿ ನೀಡದ, ಹಲವಾರು ಅವೈಜ್ಞಾನಿಕ ಕಾಯ್ದೆಗಳನ್ನು ಜಾರಿದೆ ತರುವ ಮೂಲಕ ರೈತರ ನಾಶಕ್ಕೆ ನಿಂತಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಶಾಸಕ ಟಿ.ರಘುಮೂರ್ತಿ ಕರೆ ನೀಡಿದರು.
ಅವರು, ಸೋಮವಾರ ತಾಲ್ಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಪ್ರೊ.ಬಣ) ಬೆಳೆ ವಿಮೆಗಾಗಿ ಒತ್ತಾಯಿಸಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ನೇತೃತ್ವದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.
ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಬೆಳೆ ವಿಮೆ ಹಣ ಪಡೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಮಾಡಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೈತರು ಸಂಘಟಿತರಾಗಿ ಕೇಂದ್ರ ಕೃಷಿ ನೀತಿ ತಿದ್ದುಪಡಿಗೆ ಒತ್ತಾಯಿಸಬೇಕು ಎಂದರು.
ತಹಶೀಲ್ದಾರ್ ಮಲ್ಲಿಕಾರ್ಜುನ, ಕೃಷಿ ಅಧಿಕಾರಿಗಳು ಮೊದಲಾದವರು ಇದ್ದರು.

[t4b-ticker]

You May Also Like

More From Author

+ There are no comments

Add yours