ಕೋವಿಡ್ ಸ್ಥಿತಿಗತಿ ಕುರಿತು ಸಿಎಂ ಇಂದು ನಡೆಸಿದ ಸಭೆಯ ಮುಖ್ಯಾಂಶಗಳು
- ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳು ಈ ತಿಂಗಳ ಅಂತ್ಯದವರೆಗೂ ವಿಸ್ತರಣೆ.
- ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚನೆ.
- ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧಾರ.
- ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚನೆ.
- ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ.
- ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಗಳ ಕಿಟ್ ಒದಗಿಸುವಂತೆ ಸೂಚನೆ.
- ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆ ಬಲಪಡಿಸುವಂತೆ ಸೂಚನೆ.
- ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ.
- ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭಿಸಲು ಸೂಚನೆ.
- ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ನಿರ್ದೇಶನ.
- ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ ಮೂರನೇ ಡೋಸ್ ಆದ್ಯತೆಯ ಮೇರೆಗೆ ನೀಡಲು ಸೂಚನೆ.
- ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ನಿರ್ದೇಶನ.
- ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ.
- ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ. ಬೆಂಗಳೂರು ಸೇರಿ ನಗರ ಪ್ರದೇಶಗಳಲ್ಲಿ ಮಾರುಕಟ್ಟೆಗಳ ವಿಕೇಂದ್ರೀಕರಣಕ್ಕೆ ಚಿಂತನೆ.
- ರಾಜ್ಯದಲ್ಲಿ ಕರೊನಾ ಪರಿಸ್ಥಿತಿ ನಿಭಾಯಿಸುವ ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಲು ನಿರ್ದೇಶನ.
- ಮಾತ್ರವಲ್ಲದೆ ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ಪ್ರಕರಣಗಳ ಸಂಖ್ಯೆ ಮೇರೆಗೆ ಬಿಇಒ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ವರದಿ ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಈ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಬಿ.ಸಿ. ನಾಗೇಶ್, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[t4b-ticker]
+ There are no comments
Add yours