ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ19: ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆಯ ಮೂಲಕ ಜಿಲ್ಲೆ ಕೀರ್ತಿ ತಂದಿದ್ದಾರೆ. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ ಪ್ರಶಂಸಿಸಿದ್ದಾರೆ. ಹೊಸದುರ್ಗ ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಸಿಂಚನ ಕೆ.ಎಂ, ಎಂ.ಪಿ.ಪ್ರಕಾಶ್ ಹೈಸ್ಕೂಲ್ನ ವಿದ್ಯಾರ್ಥಿನಿ ಯುಕ್ತ ಬಿ. ಚಳ್ಳಕೆರೆ ತಾಲ್ಲೂಕಿನ ವಾಸವಿ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ನ ವಿದ್ಯಾರ್ಥಿ ಭುವನ್ಕುಂಚಮ್ ಆರ್, ಹಿರಿಯೂರು ತಾಲ್ಲೂಕಿನ ರಾಷ್ಟಿçÃಯ ಅಕಾಡೆಮಿ ಇಂಗ್ಲೀಷ್ ಹೈಸ್ಕೂಲ್ನ ವಿದ್ಯಾರ್ಥಿನಿ ಸಂಜನಾ ಸಿ.ಎ, ಯಜ್ಞಾವಲ್ಕö್ಯ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ನ ವಿದ್ಯಾರ್ಥಿನಿ ಸೃಷ್ಠಿ ವಿ.ಆರ್, ಚಿತ್ರದುರ್ಗ ತಾಲ್ಲೂಕಿನ ವಿದ್ಯಾ ವಿಕಾಸ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ನ ವಿದ್ಯಾರ್ಥಿನಿ ರಕ್ಷಾ ಬಿ.ಎಂ 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.
[t4b-ticker]
+ There are no comments
Add yours