ತಾಲ್ಲೂಕು ಕಛೇರಿಗಳಲ್ಲಿ ಸಂವಿಧಾನಬದ್ಧ ನಿಯಮಾನುಸಾರ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಮನವಿ

 

 

 

 

ಮೊಳಕಾಲ್ಮುರು:.
ಟಚಿತ್ರದುರ್ಗ:ಜಿಲ್ಲೆಯ ಎಲ್ಲಾ ತಾಲ್ಲೂಕು ಕಛೇರಿಗಳಲ್ಲಿ ಸಂವಿಧಾನಬದ್ಧ ನಿಯಮಾನುಸಾರ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವುದು ಹಾಗೂ ಅಧಿಕಾರಿಗಳ ಕಿರುಕುಳ ತಪ್ಪಿಸುವಂತೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿಪತ್ರ ನೀಡಲಾಯಿತು…

ಈ ವೇಳೆ ಜಿಲ್ಲಾಧ್ಯಕ್ಷರಾದ ಎಂಪಿ ಮಲ್ಲಿಕಾರ್ಜುನಸ್ವಾಮಿ ಮಾತನಾಡಿ ಬೇಡಜಂಗಮ ಸಮಾಜಕ್ಕೆ ಕಾನೂನಾತ್ಮಕವಾಗಿ ಸಿಗುವ ಮೀಸಲಾತಿ ಸೌಲಭ್ಯ ದೊರಕಿಸಿಕೊಡಲು ಹೈಕೋರ್ಟು ಸುಪ್ರೀಂಕೋರ್ಟ್ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಬೇರೆಬೇರೆ ಆದೇಶಗಳು ಇವುಗಳಲ್ಲಿ ಸಂವಿಧಾನಬದ್ಧವಾಗಿ ಬೇಡ ಜಂಗಮರಿಗೆ ದೊರೆಯ ಬೇಕಿರುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಯಲ್ಲಿ ಕೊಡಲು ತಾವುಗಳು ಆದೇಶಿಸಬೇಕು…

 

 

ಜಂಗಮರೇ ಬೇಡ ಜಂಗಮರೆಂದು ಈಗಾಗಲೇ ನ್ಯಾಯಾಲಯದಲ್ಲಿ ತೀರ್ಪು ಬಂದಿರುವದರಿಂದ ಸಂವಿಧಾನಬದ್ಧವಾಗಿ ಬೇಡ ಜಂಗಮರಿಗೆ ಸಿಗಬೇಕು ಇರುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೊಡಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಾತಿ ಪ್ರಮಾಣ ಪತ್ರ ಕೊಡುವ ಸಕ್ಷಮ ಪ್ರಾಧಿಕಾರಿಗೆ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು…

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ನಾನಾ ಭಾಗಗಳ ಬೇಡಜಂಗಮ ಜನಾಂಗದವರು ಉಪಸ್ಥಿತರಿದ್ದರು…

[t4b-ticker]

You May Also Like

More From Author

+ There are no comments

Add yours