ಮೊಳಕಾಲ್ಮುರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ಪರ ಮತಯಾಚನೆ

 

 

 

 

ಮೊಳಕಾಲ್ಮುರು:   ಚಳ್ಳಕೆರೆ  ಶಾಸಕರಾದ  ಶ್ರೀ ಟಿ ರಘುಮೂರ್ತಿ ಅವರು ಇಂದು, ಚಿತ್ರದುರ್ಗ ದಾವಣಗೆರೆ ನಗರದ ಸ್ಥಳೀಯ ಸಂಸ್ಥೆ ಚುನಾವಣೆ ಸಲುವಾಗಿ ಮೊಳಕಾಲ್ಮೂರು ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ವಿಧಾನ ಪರಿಷತ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ ಸೋಮಶೇಖರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಇದೇ ವೇಳೆ ಮೊಳಕಾಲ್ಮೂರು ನಗರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಪಂಚಾಯತಿ ಸದಸ್ಯರೊಂದಿಗೆ ಮತ್ತು ಮುಖಂಡರೊಂದಿಗೆ  ಸಭೆ ನಡೆಸಿ  ಚುನಾವಣೆಯಲ್ಲಿ  ಬಿ ಸೋಮಶೇಖರ್ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸಲು ಶ್ರಮವಹಿಸುವಂತೆ ಕೋರಲಾಯಿತು.

ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ, ಬಿಜೆಪಿ ಪಕ್ಷ ಪಂಚಾಯತಿ ವ್ಯವಸ್ಥೆಗೆ ಮಾರಕವಾಗಿದೆ ಎಂದರು. ಎಲ್ಲಾರೂ ಸಹ ಹಗಲಿರುಳು ಶ್ರಮಿಸಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ

ಎಂದರು.

 

 

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ  ಸೋಮಶೇಖರ್ ಅವರು ಸರಳ‌ ಸಜ್ಜನಿಕೆಯ ವ್ಯಕ್ತಿ. ಕಾಂಗ್ರೆಸ್ ಪಕ್ಷವನ್ನು ಎಲ್ಲಾ ಸದಸ್ಯರು ಮತ ಚಲಾಯಿಸುವ ಮೂಲಕ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಲು ಎಲ್ಲಾರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ತಾಜ್ ಪೀರ್,  ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ರಾಜ್ಯ ಸಂಘಟನೆ ಕಾರ್ಮಿಕರ ಅಧ್ಯಕ್ಷ  ಜಿ.ಎಸ್.ಮಂಜುನಾಥ್ , ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಬಾಬು ಮತ್ತು ಮೊಳಕಾಲ್ಮುರು  ಕ್ಷೇತ್ರ ಗ್ರಾಮ ಪಂಚಾಯತಿ ಸದಸ್ಯರುಗಳು ಮತ್ತು  ಮುಖಂಡರು ಭಾಗವಹಿಸಿದ್ದರು.

 

 

[t4b-ticker]

You May Also Like

More From Author

+ There are no comments

Add yours