ಚಿತ್ರದುರ್ಗ,ಆಗಸ್ಟ್23:
ಸಾವಯವ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಸಾವಯವ ಕೃಷಿ ಅಳವಡಿಕೆ ಮತ್ತು ದೃಢೀಕರಣ ಕಾರ್ಯಕ್ರಮವನ್ನು 2021-22ನೇ ಸಾಲಿನಲ್ಲಿಯೂ ಮುಂದುವರೆಸಿದೆ. ಜಿಲ್ಲೆಯ ಆಸಕ್ತ ರೈತ ಬಾಂದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಡಾ.ಪಿ. ರಮೇಶ್ ಕುಮಾರ್ ತಿಳಿಸಿದ್ದಾರೆ.
ಹೊಸದಾಗಿ ಅರ್ಜಿ ಸಲ್ಲಿಸುವ ಗುಂಪುಗಳು ಹಾಗೂ ವ್ಯಕ್ತಿಗತ ಪ್ರಮಾಣೀಕರಣ ಪ್ರಸ್ತಾವನೆಗಳಿಗೆ ಶೇ.90 ರಷ್ಟು ಪ್ರಮಾಣಿಕರಣ ಶುಲ್ಕವನ್ನು ಸರ್ಕಾರದಿಂದ ಭರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಹುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
[t4b-ticker]
+ There are no comments
Add yours