ಸಾಹಿತ್ಯ ಲೋಕದಲ್ಲಿ ‘ಚಂಪಾ’ ಎಂದೇ ಹೆಸರಾದ ಕವಿ, ನಾಟಕಕಾರ ಪ್ರೊ.ಚಂದ್ರಶೇಖರ ಪಾಟೀಲ(82) ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಭಾಷಾ ಚಳವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದವರು ಚಂಪಾ. 1939ರ ಜೂನ್ 18ರಂದು ಜನಿಸಿದ ಚಂಪಾ ಅವರ ಹುಟ್ಟೂರು ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹತ್ತಿಮತ್ತೂರು.ಸಾಹಿತಿ, ಹೋರಾಟಗಾರ ಚಂಪಾ ಅವರು ಇಂದು ಬೆಳಿಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬರು ಪುತ್ರಿ ಇದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ಅಥವಾ ಹಾವೇರಿ ಸಮೀಪದ ಡೊಂಬರಮತ್ತೂರಿನಲ್ಲಿ ನಡೆಸುವುದೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಕೋವಿಡ್ ಪ್ರಕರಣಗಳ ಕಾರಣ ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರ ಅಂತಿಮವಾಗಿಲ್ಲ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
[t4b-ticker]
+ There are no comments
Add yours