ಹಿರಿಯೂರು ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ವಿಶೇಷ ಪೂಜೆ

 

 

 

 

ಹಿರಿಯೂರು.ಜುಲೈ.13-ನಗರದ ನೃಪತುಂಗ ಬಡಾವಣೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.ಇದರ ಅಂಗವಾಗಿ ಮಹಾಗಣಪತಿ ಹೋಮ ಕಾಕಡಾರತಿ ಹಾಗೂ ಭಕ್ತಾದಿಗಳಿಂದ ಶಿರಡಿ ಸಾಯಿಬಾಬಾ ದೇವರಿಗೆ ದೇವರಿಗೆ ಪಂಚಾಮೃತ ಅಭಿಷೇಕ ಮತ್ತು ಕ್ಷೀರಭಿಷೇಕ ಮಹರುದ್ರಾಭಿಷೇಕ ನವಗ್ರಹ ಪೂಜೆ ಹಾಗೂ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ನೆರವೇರಿತು ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿತು. ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗುರುಸ್ವಾಮಿಗಳಾದ ಸದಾನಂದ ಸ್ವಾಮೀಜಿಯವರು ಮತ್ತು ಸಾಯಿ ಬಾಬಾ ಮಂದಿರದ ಕರ್ಣ ಸ್ವಾಮೀಜಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ನಗರದ ಅನೇಕ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

 

 

[t4b-ticker]

You May Also Like

More From Author

+ There are no comments

Add yours