ಚಿತ್ರದುರ್ಗ,ಆಗಸ್ಟ್13:
ಆಗಸ್ಟ್ 17 ರಂದು ಚಿತ್ರದುರ್ಗ ತಾಲ್ಲೂಕಿನ ಪಿ.ಪಿ.ಎಸ್ ಶಾಲೆ ಗುರುಭವನ ಪಕ್ಕ ಚಿತ್ರದುರ್ಗ ಇಲ್ಲಿ ನಡೆಯಬೇಕಾಗಿದ್ದ, ವೈದ್ಯಕೀಯ ಮೌಲ್ಯಮಾಪನ ಶಿಬಿರವನ್ನು ಕಾರಣಾಂತರಗಳಿಂದ (ಕೋವಿಡ್-19 ವ್ಯಾಕ್ಸಿನ್ ನೀಡುತ್ತಿರುವುದರಿಂದ) ಚಿತ್ರದುರ್ಗದ ಮದಕರಿನಾಯಕ ಪ್ರೌಢಶಾಲೆಗೆ ಬದಲಾಯಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಅಡಿಯಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ಉಚಿತವಾಗಿ ಒದಗಿಸಲು ವೈದ್ಯಕೀಯ ಮೌಲ್ಯಮಾಪನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
+ There are no comments
Add yours