5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ:ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

 

ಚಿತ್ರದುರ್ಗ:  ಚಿತ್ರದುರ್ಗದ ಜಿಲ್ಲಾಸ್ಪತ್ರೆ ಆವರಣದಲ್ಲಿ ಪಲ್ಸ್ ಪೊಲಿಯೋ ಲಿಸಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ ಇವರ ವತಿಯಿಂದ ಚಿತ್ರದುರ್ಗದ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ 0 ಯಿಂದ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಹಾಗೂ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಅವರು ಆಗಮಿಸಿ ಖುದ್ದು ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನ ನೀಡಿದ್ದಾರೆ.

ಇನ್ನೂ ಈ ವೇಳೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಮಾತನಾಡಿದ್ದು ಪೋಲಿಯೊ ಮುಕ್ತ ರಾಷ್ಟ್ರ ಮಾಡಲು ಅಭಿಯಾನ ನಡೆಯುತ್ತಿದೆ.  2009 ರಿಂದ ನಮ್ಮ ರಾಜ್ಯದಲ್ಲಿ ಯಾವುದೇ ಪೋಲಿಯೊ ಪ್ರಕರಣಗಳು ಇಲ್ಲದಿರುವುದು ದೊಡ್ಡ ಹೆಮ್ಮೆಯ ವಿಷಯವಾಗಿದೆ. ನಮ್ಮ ವೈಧ್ಯರು ದೊಡ್ಡ ಸಾಧನೆ ಮಾಡಿದ್ದಾರೆ. ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಇನ್ನು ಪೋಲಿಯೊ ಪ್ರಖರಣಗಳು ಪತ್ತೆಯಾಗುತ್ತಿದ್ದು ಹಾಗಾಗಿ ಇಲ್ಲಿ ಅಭಿಯಾನ ಆರಂಬ ಮಾಡಿದ್ದೇವೆ. ಸದೃಡ ಆರೋಗ್ಯವಂತ ಮಕ್ಕಳು ಇರಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಮಾಡುತ್ತಿದ್ದು ಕಳೆದ ಹಲವು ದಿನಗಳಿಂದ ನಮ್ಮ ಇಲಾಖೆ ಇದಕ್ಕೆ ಶ್ರಮಿಸುತ್ತಿದ್ದು ಪೋಷಕರು ಇದಕ್ಕೆ ಸಹಕರಿಸಬೇಕು ಎಂದು ಕೆ ಸಿ ವೀರೇಂದ್ರ ಪಪ್ಪಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಟಿ ಅವರು ಮಾತನಾಡಿದ್ದು ಪೋಲಿಯೊ ಮುಕ್ತ ರಾಷ್ಟ್ರ ಮಾಡು ಉದ್ದೇಶದಿಂದ ಸರ್ಕಾರಗಳು ಪೋಲಿಯೊ ಲಸಿಕಾ ಅಭಿಯಾನವನ್ನ ಹಮ್ಮಿಕೊಂಡಿವೆ. ಪ್ರಸ್ತುತ ಜಿಲ್ಲೆಯಲ್ಲಿ ಪೋಲಿಯೊ ಪ್ರಕರಣಗಳು ಇರುವುದಿಲ್ಲ. ಆದ್ದರೂ ಕೂಡ ಅಕ್ಕಪಕ್ಕದ ಅನೇಕ ದೇಶಗಳಲ್ಲಿ ಈಗಲೂ ಕೂಡ ಪೋಲಿಯೊ ಪ್ರಖರಣಗಳು ಚಾಲ್ತಿಯಲ್ಲಿರುವ ಕಾರಣ ನಮ್ಮ ದೇಶದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 135105 ಮಕ್ಕಳಿಗೆ ಪೋಲಿಯೊ ಲಸಿಕೆ ಮೀಡುವ ಗುರಿ ಹೊಂದಲಾಗಿದ್ದು ಒಟ್ಟು 1084 ಬೂತ್ ಗಳನ್ನ ನಿರ್ಮಾಣ ಮಾಡಿದ್ದು ಮಾರ್ಚ್ 4 ರಿಂದ 6 ರ ವರೆಗೆ ಮನೆ ಮನೆ ಬೇಟಿ ನೀಡಿ ಪೋಲಿಯೊ ಲಸಿಕೆ ಹಾಕಲಾಗುತ್ತಿದ್ದು ಸಾರ್ವಜನಿಕರು ಇದಕ್ಕೆ ಸಹಕಾರ ಕೊಟ್ಟು ಪೋಲಿಯೊ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಸಲಹೆಯನ್ನ ನೀಡಿದ್ದಾರೆ. ಇನ್ನೂ ಇದೇ ಸಂದರ್ಭದಲ್ಲಿ ಸ್ವಾಸ್ತ್ಯ ಫೌಂಡೇಷನ್ ನ ಸಂಸ್ಥಾಪಕರಾದ ಡಾ ಡಾ ತೋಯಿಜಾಕ್ಷಿ ಬಾಯಿ ಅವರಿಂದ ಆಶಾ ಕಾರ್ಯಕರ್ತೆಯರಿಗೆ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಬಿಳಿ ಛತ್ರಿಗಳನ್ನ ಉಚಿತವಾಗಿ ವಿತರಣೆ ಸಹ ಮಾಡಲಾಯಿತು.

ಇದನ್ನೂ ಓದಿ:ಬಡವರ ಆರ್ಥಿಕ ಸಬಲೀಕರಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು:ಡಿ.ಸುಧಾಕರ್

ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್, ಶಾಸಕ ಕೆ‌ಸಿ ವೀರೇಂದ್ರ ಪಪ್ಪಿ ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಅಭಿನವ್ ಡಿ ಎಂ, ತಾಲ್ಲೂಕು ಆರೋಗ್ಯಾಧಿಕಾರಿ ಡಾ ಬಿ ವಿ ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಮೂಗಪ್ಪ, ಡಿಸ್ಟ್ರಿಕ್ಟ್ ಸರ್ಜನ್ ರವೀಂದ್ರ, ಮೆಡಿಕಲ್ ಕಾಲೇಜಿ ಆಡಳಿತಾಧಿಕಾರಿ ಯುವರಾಜ್ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಆಶಾ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours