ಚಿತ್ರದುರ್ಗ, ಡಿಸೆಂಬರ್06:
ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಅನುಷ್ಠಾನಕ್ಕೆ ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಸೌಲಭ್ಯ ಪಡೆಯಲು ಇಚ್ಚಿಸುವವರು ಆನ್ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ kacdc.karnataka.gov.in ಇಲ್ಲಿ ಸಲ್ಲಿಸಬಹುದಾಗಿದೆ. ನಿಗಮದ ಸಹಾಯವಾಣಿ 9448451111 ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು kacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ಗೆ ಜೋಡಣೆಯಾಗಿರಬೇಕು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.
[t4b-ticker]
+ There are no comments
Add yours