ಚಿತ್ರದುರ್ಗ,ಅಕ್ಟೋಬರ್23:
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮದಕರಿ ಯುವಕ ಸಂಘ ಹಾಗೂ ಮದಕರಿ ನಾಯಕ ಸಾಂಸ್ಕøತಿಕ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ “ಕನ್ನಡಕ್ಕಾಗಿ ನಾವು ಅಭಿಯಾನ” ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಗೀತ ಗಾಯನ ಕಾರ್ಯಕ್ರಮವನ್ನು ಅಕ್ಟೋಬರ್24ರಂದು ಸಂಜೆ 5 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಚಿತ್ರದುರ್ಗ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಸಹಾಯಕ ಪ್ರಾಧ್ಯಾಪಕರಾದ ತಾರಿಣಿ ಶುಭದಾಯಿನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ತಿಳಿಸಿದ್ದಾರೆ.
=====
[t4b-ticker]
+ There are no comments
Add yours