ಬೆಂಗಳೂರು: ಉಪ ನೋಂದಣಿ ಕಚೇರಿಯಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್ಲೈನ್ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.
ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿದೆ. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
[t4b-ticker]
+ There are no comments
Add yours