ಎಲ್ಲಾರೂ ಲಸಿಕೆ ಪಡೆಯಿರಿ ಕೋವಿಡ್ ಮುಕ್ತ ದೇಶವಾಗಿಸಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

ಚಿತ್ರದುರ್ಗ:

  1. ಭಾರತವನ್ನು ಕೊರೋನಾ ಮುಕ್ತ ದೇಶವನ್ನಾಗಿ ಮಾಡಬೇಕೆಂಬುದು ಪ್ರಧಾನಿ ನರೇಂದ್ರಮೋದಿರವರ ಕನಸಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ ಮಾಡಿದರು.
    ರೋಟರಿ ಕ್ಲಬ್ ಚಿತ್ರದುರ್ಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಎಸ್.ಆರ್.ಬಿ.ಎಂ.ಎಸ್.ರೋಟರಿ ಬಾಲಭವನದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಉಚಿತ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಕೊರೋನಾ ಎರಡನೆ ಹಂತದ ಅಲೆಯನ್ನು ನಿಗ್ರಹಿಸಬೇಕಾಗಿರುವುದರಿಂದ ಹದಿನೆಂಟು ವರ್ಷದವರಿಗೆ ಉಚಿತವಾಗಿ ಕೋವಿಡ್ ವಿರುದ್ದ ಕೇಂದ್ರ ಸರ್ಕಾರ ಲಸಿಕೆ ಪೂರೈಸಿದ್ದು, ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಜೊತೆಗೆ ಎಲ್ಲರೂ ಮಾಸ್ಕ್‌ಗಳನ್ನು ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಹೇಳಿದರು.
    ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಭದ್ರಿನಾಥ್, ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷೆ ರಾಜೇಶ್ವರಿ ಸಿದ್ದರಾಂ, ಲಸಿಕಾ ಕಾರ್ಯಕ್ರಮದ ಸಂಚಾಲಕ ಚಂದ್ರಮೋಹನ್, ಬ್ರಹ್ಮಾನಂದಗುಪ್ತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಈ ಸಂದರ್ಭದಲ್ಲಿದ್ದರು.
[t4b-ticker]

You May Also Like

More From Author

+ There are no comments

Add yours