ಕನ್ನಡಪರ ಹೋರಟಗಾರ ಡಾ.ಚಂದ್ರಶೇಖರ್ ಪಾಟೀಲ್ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

 

 

 

ಕನ್ನಡಪರ ಹೋರಟಗಾರ ಡಾ.ಚಂದ್ರಶೇಖರ್ ಪಾಟೀಲ್ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

 

ಕನ್ನಡದ ವಿಚಾರ ಬಂದಾಗ ಯಾವುದೇ ರಾಜಿ ಮಾಡಿಕೊಳ್ಳದೆ ಕನ್ನಡ ಪರ ನಿಲುವು ತೆಗೆದುಕೊಳ್ಳುತ್ತಿದ್ದ ಚಂಪಾ ಅವರು ಕನ್ನಡ ಕಟ್ಟುವ ಕೆಲಸದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಹಲವು ಯುವ ಬರಹಗಾರರು, ಯುವಜನರಿಗೆ ಸ್ಪೂರ್ತಿಯಾಗಿ ಅವರ ಬೆಳವಣಿಗೆಗೆ ಪ್ರೋತ್ಸಾಹಿಸುತ್ತಿದ್ದರು.ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು. ಚಂಪಾ ಅವರು ನಾಡು ನುಡಿಗೆ ಸಲ್ಲಿಸಿದ ಸೇವೆಗಾಗಿ ನೂರಾರು ಪ್ರಶಸ್ತಿ, ಗೌರವಗಳು ಅವರನ್ನು ಹುಡುಕಿಕೊಂಡು ಬಂದಿವೆ. ಸರ್ಕಾರಗಳ ಜನವಿರೋಧಿ ನೀತಿಯ ವಿರುದ್ಧ ತಮ್ಮ ಬರಹಗಳಿಂದಲೇ ಎಚ್ಚರಿಸಿ ಜನಪರವಾಗಿ ನಿಲ್ಲುತ್ತಿದ್ದ ಚಂಪಾ ಅವರು ಅಪಾರ. ಅಭಿಮಾನಿ ಪಡೆಯನ್ನು ಹೊಂದಿದ್ದರು.ಅವರು ಅಗಲುವಿಕೆ ಸುದ್ದಿ‌ ಕೇಳಿ ದುಃಖವಾಯಿತು. ದೇವರು ಚಂಪಾ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

[t4b-ticker]

You May Also Like

More From Author

+ There are no comments

Add yours