ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ಗೆಲ್ಲಿಸಲು ಎಲ್ಲಾರೂ ಶ್ರಮಿಸೋಣ: ಶಾಸಕ ಟಿ.ರಘುಮೂರ್ತಿ.

 

ಚಿತ್ರದುರ್ಗ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚಳ್ಳಕೆರೆ ಶಾಸಕ  ಟಿ.ರಘುಮೂರ್ತಿ ಅವರು ಮತ್ತು ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಯಾದ  ಬಿ. ಸೋಮಶೇಖರ್ ರವರು ಚಿತ್ರದುರ್ಗ ತಾಲೂಕು ತುರುವನೂರು ಹೋಬಳಿಯ ಪಂಚಾಯತಿ ಸದಸ್ಯರನ್ನು ಭೇಟಿ ನೀಡಿ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಸಭೆ ನಡೆಸಿ  ಚಿತ್ರದುರ್ಗ-ದಾವಣಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಬಿ. ಸೋಮಶೇಖರ್ ಅವರನ್ನು ಗೆಲ್ಲಿಸುವ ಹೊಣೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಎಲ್ಲಾ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತಿ ಸದಸ್ಯರು ಯಾವುದೇ ಪಕ್ಷದವರ ಆಸೆಗಳಿಗೆ ಬಲಿಯಾಗದ ನಮ್ಮ ಸರಳ‌ ಸಜ್ಜನಿಕೆಯ ವ್ಯಕ್ತಿ ಎಂದರು.

ರಾಜ್ಯದ ಬಿಜೆಪಿ ಸರ್ಕಾರ ದುರಾಡಳಿತದಿಂದ ಕೂಡಿದ್ದು ಅವರು ಸರ್ಕಾರ ಜನರ ಸಮಸ್ಯೆ ಆಲಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತ ಸಿದ್ದವಾಗಿದೆ. ಆದ್ದರಿಂದ ಎಲ್ಲಾರೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳು ಮತ್ತು ಮುಖಂಡರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours