ಕೋವಿಡ್ ತಡೆಗೆ ಹಳ್ಳಿಗಳತ್ತ ಮುಖ ಮಾಡಿದ ಜಿಲ್ಲಾಡಳಿತ, ಗ್ರಾಮೀಣ ಜನರ ಸಹಕಾರಕ್ಕೆ ಡಿಸಿ ಕವಿತಾ ಎಸ್ ಮನ್ನಿಕೇರಿ ಮನವಿ

 

ಚಿತ್ರದುರ್ಗ ತಾಲ್ಲೂಕಿನ 138 ಹಳ್ಳಿಗಳಲ್ಲಿ ಕೋವಿಡ್ ಸೋಂಕು: 783 ಕೋವಿಡ್ ಪ್ರಕರಣಗಳಲ್ಲಿ 407 ಸಕ್ರಿಯ
ಕೋವಿಡ್ ತಡೆಗೆ ಹಳ್ಳಿಗಳತ್ತ ಮುಖ ಮಾಡಿದ ಜಿಲ್ಲಾಡಳಿತ
ಚಿತ್ರದುರ್ಗ,ಮೇ.27:
ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳವಾಗುವ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದು, ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ ಚಿತ್ರದುರ್ಗ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಿದೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಚಿತ್ರದುರ್ಗ ತಾಲ್ಲೂಕಿನ 138 ಹಳ್ಳಿಗಳಿಗೂ ಕೋವಿಡ್ ಸೋಂಕು ವ್ಯಾಪಿಸಿದೆ. ಮೇ 03 ರಿಂದ ಇಲ್ಲಿಯವರೆಗೆ 783 ಪ್ರಕರಣಗಳು ವರದಿಯಾಗಿದ್ದು, 407 ಸಕ್ರಿಯ ಪ್ರಕರಣಗಳು ಇವೆ.
ಚಿತ್ರದುರ್ಗ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಾದ ಪಿಳ್ಳೇಕೆರೆನಹಳ್ಳಿ, ಮದಕರಿಪುರ, ಸೀಬಾರ, ತುರುವನೂರು, ಜಿ.ಆರ್.ಹಳ್ಳಿ, ಕ್ಯಾಸಾಪುರ, ಬೆಳಗಟ್ಟ, ಪಂಡರಹಳ್ಳಿ, ಹಿರೇಗುಂಟನೂರು, ಕಾಲ್ಗೆರೆ, ಡಿ.ಎಸ್.ಹಳ್ಳಿ, ಭೀಮಸಮುದ್ರ, ಕಾಸವರಹಟ್ಟಿ, ವಿಜಯಪುರ, ಸಿ.ಜಿ.ಹಳ್ಳಿ, ಗೊಡಬನಾಳ್ ಗ್ರಾಮದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿದೆ.
ನಗರದ ಪ್ರದೇಶಗಳಲ್ಲಿ ಮಾತ್ರವೇ ಹೆಚ್ಚಿದ್ದ ಕೋವಿಡ್ ಸೋಂಕು ಇದೀಗ ಹಳ್ಳಿ ಹಳ್ಳಿಗೂ ಸೋಂಕು ವ್ಯಾಪಿಸಿದೆ. ಮನೆ ಮಂದಿಯೆಲ್ಲ ಸೋಂಕಿಗೆ ತುತ್ತಾಗಿರುವ ಉದಾಹರಣೆಗಳಿವೆ. ಕೋವಿಡ್ ಸೋಂಕಿತರಲ್ಲಿ ಕೆಲವರು ಹೋಂ ಐಸೋಲೇಷನ್, ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಮತ್ತು ಚಿತ್ರದುರ್ಗ ನಗರದ ವಿವಿಧೆಡೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ತಡೆಗೆ ಹಳ್ಳಿಗಳತ್ತ ಮುಖ ಮಾಡಿದ ಜಿಲ್ಲಾಡಳಿತ: ಗ್ರಾಮೀಣ ಪ್ರದೇಶದಲ್ಲಿ ಶರವೇಗದಲ್ಲಿ ಹರಡುತ್ತಿರುವ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಳ್ಳಿಗಳತ್ತ ಮುಖ ಮಾಡಿದೆ.
ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರದ ಸೂಚನೆಯಂತೆ ಜಿಲ್ಲಾಡಳಿತ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ದಿನವೂ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡುವುದು, ಕೋವಿಡ್ ಸೋಂಕಿನ ಸರಪಳಿ ತುಂಡರಿಸುವುದು ಸೇರಿದಂತೆ ಕೋವಿಡ್-19 ಕುರಿತು ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ.
ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‍ಗೆ ಶಿಫ್ಟ್: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಈಗಾಗಲೇ ದಿನ ಬಿಟ್ಟು ದಿನ ಲಾಕ್‍ಡೌನ್ ಜಾರಿಗೊಳಿಸಲಾಗಿದೆ.
ಕೋವಿಡ್ ಸೋಂಕಿತರಿಗಾಗಿ ಜಿಲ್ಲೆಯಾದ್ಯಂತ ವಿವಿಧೆಡ ಹಾಸ್ಟೆಲ್‍ಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೋವಿಡ್ ಸೋಂಕು ದೃಢಪಟ್ಟ ಸಂದರ್ಭದಲ್ಲಿ ಹೋಂ ಐಸೋಲೇಷನ್ ಬದಲಾಗಿ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗೆ ಸೋಂಕಿತರನ್ನು ಶಿಫ್ಟ್ ಮಾಡಲಾಗುತ್ತಿದೆ.
ಹಳ್ಳಿ ಜನರು ಮುಂಜಾಗ್ರತಾ ವಹಿಸಲು ಡಿಸಿ ಸೂಚನೆ: ಕೋವಿಡ್-19 ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಅದರಲ್ಲೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೂ ಕೋವಿಡ್ ಸೋಂಕು ವ್ಯಾಪಿಸಿದ್ದು, ಗ್ರಾಮೀಣ ಜನರು ಕೋವಿಡ್‍ನಿಂದ ರಕ್ಷಣೆ ಪಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದ್ದಾರೆ.
ಕೋವಿಡ್-ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕೋವಿಡ್ ಲಕ್ಷಣಗಳಿದ್ದರೆ ಕೂಡಲೇ ಕೋವಿಡ್ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆಯುಲು ಮುಂದಾಗಬೇಕು. ಕೋವಿಡ್ ತಡೆಯುವ ನಿಟ್ಟಿನಲ್ಲಿ ಗ್ರಾಮೀಣ ಜನರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಾದ್ಯಂತ ನಿತ್ಯವೂ ಆತಂಕ ಹುಟ್ಟಿಸುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಭಾರಿ ಪ್ರಯತ್ನ ನಡೆಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಿಗೆ ಹರಡದಂತೆ ಗ್ರಾಮೀಣ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ.

[t4b-ticker]

You May Also Like

More From Author

+ There are no comments

Add yours