ಶಿವಮೊಗ್ಗ: ಬಿಳಿ ರಕ್ತಕಣ ಕಡಿಮೆಯಾದ ಹಿನ್ನೆಲೆಯಲ್ಲಿ ಒಂದು ವರ್ಷದ ಕಂದಮ್ಮ ಅಸುನೀಗಿರುವುದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಕೊರೊನಾ ಸೋಂಕಿಗೂ ಒಳಗಾಗಿದ್ದ ವರ್ಷದ ಮಗು ಉದಯ ಮೃತಪಟ್ಟಿರುವುದು. ಶಿವಮೊಗ್ಗದ ಗಾಂಧಿ ಬಜಾರಿನ ಮಡಿವಾಳರ್ ಕೇರಿ ನಿವಾಸಿಯಾಗಿರುವ ಉದಯ, ಚೈತ್ರಾ ದಂಪತಿಯ ಮಗ.
ಮಗುವಿಗೆ ಬಿಳಿ ರಕ್ತಕಣ ಕಡಿಮೆಯಾಗಿತ್ತು ಎಂದು ಪಾಲಕರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಮಗುಗೆ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ನಂತರ ಮಗುವನ್ನು ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ನಂತರ ಮಗುವನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಿದ್ದಾರೆ. ನಂತರ ಮಗುಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿದೆ. ಚಿಕಿತ್ಸೆ ಪಡೆಯುತ್ತಿದ್ದ ಮಗು ಶನಿವಾರ ರಾತ್ರಿ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದೆ. ಮಗು ಮೃತಪಟ್ಟ ಸುದ್ದಿ ತಿಳಿದ ಪಾಲಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
[t4b-ticker]
+ There are no comments
Add yours