ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆ: ಚರ್ಚ್ ನವೀಕರಣ, ಆವರಣಗೋಡೆ, ಸ್ಮಶಾನ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಪ್ರಸ್ತಾವನೆಗೆ ಆಹ್ವಾನ

 

ಚಿತ್ರದುರ್ಗ,ಜೂನ್17:
2021-22ನೇ ಸಾಲಿಗೆ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ, ಆವರಣಗೋಡೆ, ಸ್ಮಶಾನ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಆಂಜನೇಯ ದೇವಸ್ಥಾನ ಎದುರು, ಶ್ರೀರಾಂ ಕಾಂಪ್ಲೆಕ್ಸ್ ಮೊದಲನೇ ಮಹಡಿ ಚಿತ್ರದುರ್ಗ ಇಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಈ ಕಾರ್ಯಾಲಯಕ್ಕೆ ಸಲ್ಲಿಸಲು ಸೂಚಿಸಿದೆ.
ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿರುವ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
=====

[t4b-ticker]

You May Also Like

More From Author

+ There are no comments

Add yours