ಚಳ್ಳಕೆರೆ: ತಾಲೂಕಿನ ಗೊರ್ಲತ್ತು ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಹಾಗೂ ರೈತ ಮುಖಂಡರು ಗ್ರಾಮದಲ್ಲಿ ಓಡಾಟ ನಡೆಸುತ್ತಿದ್ದ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಯಾವುದೇ ದಾಖಲೆ ಇಲ್ಲದ ಲಾರಿಯನ್ನು ಕಂಡು ಸಾಣೀಕೆರೆ ಉಪಠಾಣೆಗೆ ಒಪ್ಪಿಸಿ ಸೂಕ್ತ ಕಾನೂನು ಕ್ರಮಕ್ಕೆಆಗ್ರಹಿಸಿದ್ದಾರೆ.
[t4b-ticker]
+ There are no comments
Add yours