ಚಿತ್ರದುರ್ಗ,ನವೆಂಬರ್16:
ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿ ಚಿಕ್ಕಸಿದ್ವವ್ವನಹಳ್ಳಿ ಸಮೀಪದ ಹೋ.ಚಿ.ಬೋರಯ್ಯ ಬಡಾವಣೆಯಲ್ಲಿ (ಕಾರೋಬನಹಟ್ಟಿ) ಈಚೆಗೆ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರ ಮೃತಪಟ್ಟ ಕುಟುಂಬದ ವಾರಸುದಾರರಿಗೆ ರೂ.15ಲಕ್ಷದ ಚೆಕ್ನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಂಗಳವಾರ ವಿತರಿಸಿದರು.
ವಿಪತ್ತು ಪರಿಹಾರ ನಿಧಿಯಿಂದ ರೂ.4ಲಕ್ಷ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.1ಲಕ್ಷ ಮೊತ್ತ ಸೇರಿದಂತೆ ತಲಾ ಒಬ್ಬರಿಗೆ ರೂ.5ಲಕ್ಷದಂತೆ ಮೃತಪಟ್ಟ ಮೂವರಿಗೆ ಒಟ್ಟು ರೂ.15ಲಕ್ಷ ಮೊತ್ತ ಚೆಕ್ಅನ್ನು ಮೃತಪಟ್ಟ ಕುಟುಂಬದ ವಾರಸುದಾರರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯೂರು ತಹಶೀಲ್ದಾರ್ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಈಶ್ವರ ಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.
[t4b-ticker]
+ There are no comments
Add yours