ಚಾಮರಾಜಪೇಟೆಯ ಸ್ವರ್ಧೆ ಬಗ್ಗೆ ನಾನು ನಿರ್ಧಾರ ಮಾಡಿಲ್ಲ: ಸಿದ್ದರಾಮಯ್ಯ

 

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನಾನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಅವರು, ‘ಸದ್ಯ ನಾನು ಬಾದಾಮಿ ಕ್ಷೇತ್ರದ ಶಾಸಕ. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದೇನೆ ಎಂದು ನಾನೂ ಎಲ್ಲಿಯೂ ಹೇಳಿಲ್ಲ. ಆದರೆ, ಇಲ್ಲಿಂದ (ಚಾಮರಾಜಪೇಟೆ) ಸ್ಪರ್ಧಿಸುವಂತೆ ಕ್ಷೇತ್ರದ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಹೇಳುತ್ತಿದ್ದಾರೆ’ ಎಂದರು.

ಚಾಮರಾಜಪೇಟೆಯಲ್ಲಿ ಶಾಸಕರಾದ ಜಮೀರ್ ಅಹ್ಮದ್‌ ಖಾನ್‌ ಅವರ ನೇತೃತ್ವದಲ್ಲಿ ಆಟೋ ಚಾಲಕರಿಗೆ ಬುಧವಾರ ಪರಿಹಾರ ವಿತರಿಸುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಿದರು. ಜಮೀರ್ ಅವರು ವೈಯಕ್ತಿಕವಾಗಿ ತಲಾ ₹3 ಸಾವಿರ ಪರಿಹಾರ ಮತ್ತು ದಿನಸಿ ಕಿಟ್ ವಿತರಿಸಿದರು. ಶಾಸಕರಾದ ಬೈರತಿ ಸುರೇಶ್, ಪ್ರಕಾಶ್ ರಾಠೋಡ್ ಇದ್ದರು.

[t4b-ticker]

You May Also Like

More From Author

+ There are no comments

Add yours