ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೂ ಭರಪೂರ ಯೋಜನೆ ಮತ್ತು ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ ನೀಡಲಾಗಿದೆ.
- ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು
- ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್ ಕೇಂದ್ರ ಸ್ಥಾಪನೆ
- ರಾಮನಗರದ ಅರ್ಚಕರ ಹಳ್ಳಿಯಲ್ಲಿ ರಾಜೀವ್ಗಾಂಧಿ ಆರೋಗ್ಯ ಕೇಂದ್ರ ಸ್ಥಾಪನೆ
- ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಆರೋಗ್ಯವಾಹಿನಿ ಘೋಷಣೆ
- ಹಾವೇರಿ, ಶಿಗ್ಗಾಂವಿ ಆಸ್ಪತ್ರೆ ಮೇಲ್ದರ್ಜೆಗೆ
- ತುರ್ತು ವೈದ್ಯಕೀಯ ಸೇವೆಗೆ ಏರ್ ಆಯಂಬುಲೆನ್ಸ್ ಸೇವೆ
- ನೂತನ 100 ಪಶುಚಿಕಿತ್ಸಾಲಯ ಸ್ಥಾಪನೆ
- ರಾಜ್ಯದ ಪ್ರಮುಖ ನಗರಗಳಲ್ಲಿ 438 ‘ನಮ್ಮ ಕ್ಲಿನಿಕ್’ ಸ್ಥಾಪನೆ. ಬೆಂಗಳೂರಿನ ಎಲ್ಲ ವಾರ್ಡಗಳಲ್ಲಿ ಸ್ಥಾಪನೆ.
- ರಾಜ್ಯದ 75 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡಿ ಗ್ರಾಮೀಣ ಜನರಿಗೆ ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಒದಗಿಸುವುದು.
- ಅಪಘಾತಕ್ಕೊಳಗಾದ ರೋಗಿಗಳಿಗೆ ಆಸ್ಪತ್ರೆಗೆ ದಾಖಲಾದ 48 ಗಂಟೆಗಳೊಳಗಾಗಿ 76 ಅವಶ್ಯ ಜೀವ ರಕ್ಷಕ ಆರೋಗ್ಯ ಸೇವೆ ಒದಗಿಸುವ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಪ್ರಾರಂಭ.
+ There are no comments
Add yours