ಟ್ರಕ್ -ಕಾರ್ ನಡುವೆ ಡಿಕ್ಕಿ ಸಂಭವಿಸಿ, ಇಬ್ಬರು ವಿದ್ಯಾರ್ಥಿಗಳು ಸಾವು

 

 

 

 

ಟ್ರಕ್ -ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ರಾಮೇನಹಳ್ಳಿ ಬಳಿ ಸಂಭವಿಸಿದೆ.

 

 

ಹಾಸನದ ಮಲ್ನಾಡ್ ಇಂಜಿನಿಯರಿAಗ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ, ಹಾಗೂ ತೇಜಸ್ ಮೃತಪಟ್ಟವರಾಗಿದ್ದು, ಸುಹಾನ್ ಹಾಗೂ ಶುಭಂಕರ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ತಡರಾತ್ರಿ 12.20ರ ವೇಳೆಯಲ್ಲಿ ಮೌಳೇಶ್ವರ ರೆಡ್ಡಿ, ತೇಜಸ್ ಸುಹಾನ್,ಶುಭಂಕರ ಅವರುಗಳು ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ, ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಈ ವೇಳೆ ಕಾರಿನಲ್ಲಿದ್ದ ಮೌಳೇಶ್ವರ ರೆಡ್ಡಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ತೇಜಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಿಳಿಕೆರೆ ಠಾಣೆಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

[t4b-ticker]

You May Also Like

More From Author

+ There are no comments

Add yours