ತೇರಿಗೆ ವಿದ್ಯುತ್ ತಂತಿ ತಗುಲಿ ಯುವಕ ಸಾವು, 15ಕ್ಕೂ ಹೆಚ್ಚು ಗಾಯ

 

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ತೇರು ಎಳೆಯುವಾಗ ತೇರಿಗೆ ವಿದ್ಯುತ್ ತಂತಿ ತಗುಲಿ ಒರ್ವ ಯುವಕ ಸಾವಿನಪ್ಪಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಗ್ರಾಮದ ದುರ್ಗಮ್ಮ ದೇವಿಯ ಜಾತ್ರೆಯ ತೇರು ಎಳೆಯುವಾಗ ಈ ಅವಘಡ ಸಂಭವಿಸಿದೆ. ಈ ಘಟನೆಯಲ್ಲ್ಲಿ ಅರ್ಜುನ್ (20)ಮೃತಪಟ್ಟ ಯುವಕನಾಗಿದ್ದು, 15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[t4b-ticker]

You May Also Like

More From Author

+ There are no comments

Add yours