ನಾನಂತೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ

 

ಶಿವಮೊಗ್ಗ,ಏ.13 – ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ  ನಾನು  ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು  ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಸಂತೋಷ್ ಆತ್ಮಹತ್ಯೆ ಹಾಗೂ ಆತ್ಮಹತ್ಯೆ ಹಿಂದಿರುವ ಪಿತೂರಿ, ಷಡ್ಯಂತ್ರದ ಬಗ್ಗೆ ತನಿಖೆಯಾಗಲಿ, ನಾನಂತೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದರು.
ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ, ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಜತೆ ಮಾತನಾಡಿದ್ದೇನೆ. ಹೈಕಮಾಂಡ್‌ವರೆಗೂ ಈ ವಿಚಾರ ಹೋಗಿಲ್ಲ. ಕಾಂಗ್ರೆಸ್‌ನ ಯಾವುದೇ ದುರುದ್ದೇಶ ಹೋರಾಟಗಳಿಗೆ ಬಗ್ಗುವುದಿಲ್ಲ ಎಂದರು.
ನಾಳೆ ಅಥವಾ ನಾಡಿದ್ದು ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸುತ್ತೇನೆ ಎಂದರು. ನನ್ನ ವಿರುದ್ಧ ವ್ಯವಸ್ಥಿತಿ ಷಡ್ಯಂತ್ರ ನಡೆಯುತ್ತಿದೆ. ಇದೆಲ್ಲದರ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯ ಹೊರ ಬರಬೇಕಿದೆ ಎಂದರು.
ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್, ಯಾರೆಂಬುದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಈ ಪಿತೂರಿಗೆ ಜಗ್ಗುವುದಿಲ್ಲ. ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ನಾನು ಎಲ್ಲಿಗೂ ಓಡಿ ಹೋಗಿಲ್ಲ ಎಂದರು.
ವಾಟ್ಸಾಪ್‌ನಲ್ಲಿ ಬಂದಿರುವುದು ಡೆತ್‌ನೋಟ್ ಅಲ್ಲ, ಅದರಲ್ಲಿ ಟೈಪ್ ಮಾಡಲಾಗಿದೆ. ಮೃತ ದೇಹದ ಬಳಿ ಡೆತ್‌ನೋಟ್ ಸಿಕ್ಕಿಲ್ಲ. ಸಂತೋಷ್ ಹೇಗೆ ಸತ್ತಿದ್ದಾನೆ ಎಂಬ ಬಗ್ಗೆ ತನಿಖೆ ಆಗಬೇಕಿದೆ ಎಂದರು..

[t4b-ticker]

You May Also Like

More From Author

+ There are no comments

Add yours