ನಾಯಕನಟ್ಟಿ: ನಾಯಕನಹಟ್ಟಿಯ ದೊಡ್ಡಕೆರೆಯಲ್ಲಿ ಅಕ್ರಮವಾಗಿ ಮಣ್ಣನ್ನು ತೆಗೆಯುತ್ತಿದ್ದ 6 ಟ್ಯಾಕ್ಟರ್ ಒಂದು ಜೆಸಿಬಿ ಒಂದು ಟಿಪ್ಪರ್ ಅನ್ನು ಸೀಸ್ ಮಾಡಿಲಾಗಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.
ಸೀಸ್ ಮಾಡಿದ ಎಲ್ಲ ವಾಹನಗಳಿಗೂ 1000 ದಂಡ ವಿಧಿಸಿ ಮುಂದಿನ ದಿನಗಳಲ್ಲಿ ಈ ಕೆರೆಯ ಮಣ್ಣನ್ನು ಅಧಿಕೃತವಾಗಿ ಸಾಗಾಣಿಕೆ ಮಾಡಿದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಎಚ್ಚರಿಕೆ ನೀಡಿದ್ದಾರೆ.
ನಾಯಕನಹಟ್ಟಿ ಗ್ರಾಮದ ಈ ಕೆರೆಯಲ್ಲಿ ನಿರಂತರವಾಗಿ ಕೆರೆಯ ಮಣ್ಣನ್ನು ಸಾಗಾಣಿಕೆ ಮಾಡಿ ಬೇರೆ ಉದ್ದೇಶಕ್ಕೆ ಉಪಯೋಗಿಸುತ್ತಿದ್ದಾರೆ ಎಂಬ ದೂರಿನನ್ವಯ ನಾಯಕನಹಟ್ಟಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವರಾಜು ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಈ ಕೃತ್ಯಕ್ಕೆ ಭಾಗಿಯಾಗಿರುವ ಮೇಲ್ಕಂಡ ವಾಹನಗಳ ಮಾಲೀಕರಿಂದ ಮುಚ್ಚಳಿಕೆ ಪಡೆದು ಮುಂದಿನ ದಿನಗಳಲ್ಲಿ ಯಾರು ಕೂಡ ಈ ಕೃತ್ಯಕ್ಕೆ ಭಾಗಿಯಾಗಬಾರದು ಖಡಕ್ ಆಗಿ ತಿಳಿಸಿದ್ದಾರೆ. ಒಂದು ವೇಳೆ ಪ್ರಕರಣ ಮರುಕಳಿಸಿದರೆ ಬೇರೆಯ ರೀತಿ ಕ್ರಮ ಮತ್ತು ವಾಹನಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದಿದ್ದಾರೆ.
ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕರಾದ ಚೇತನ್ ಕುಮಾರ್ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಉಪಸ್ಥಿತರಿದ್ದರು
[t4b-ticker]
+ There are no comments
Add yours