ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.25: ಪತಂಜಲಿ ಯೋಗ ಸಮಿತಿ ಹಾಗೂ ಇತರೆ ಸಂಘಟನೆಗಳ ಆಶ್ರಯದಲ್ಲಿ ಚಿತ್ರದುರ್ಗ ಜಿಲ್ಲಾ ಬಿ.ಎಸ್.ಟಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಅವರ ಮಾರ್ಗದರ್ಶನದಲ್ಲಿ ಮೇ 26ರಿಂದ ಜೂನ್ 9ರವರೆಗೆ ಪ್ರತಿದಿನ ಬೆಳಗ್ಗೆ 5.30 ರಿಂದ ಸಂಜೆ 7 ಗಂಟೆಯವರೆಗೆ ಜಿಲ್ಲಾ ಕ್ರೀಡಾಂಗಣ ರಸ್ತೆಯ ಸ್ವಾತಂತ್ರ್ಯ ಹೋರಾಟಗಾರ ಸ್ಮಾರಕಭವನದಲ್ಲಿ 15 ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಕಾರ್ಯಕ್ರಮದ ಉದ್ಘಾಟಿಸುವರು. ಭಾರತ ಸ್ವಾಭಿಮಾನ ಟ್ರಸ್ಟ್ ಅಧ್ಯಕ್ಷರಾದ ದೇವಾನಂದ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ತರಬೇತಿಯಲ್ಲಿ ಪಾಲ್ಗೊಳುವ ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9449858889, 08194-223196ಗೆ ಸಂಪರ್ಕಿಸಬಹುದು.
[t4b-ticker]
+ There are no comments
Add yours