ನಾಳೆ ಸಚಿವ ಶ್ರೀರಾಮುಲು ಅವರಿಂದ ಏಳು ಸಮಸ್ಯೆ ಮುಕ್ತ ಗ್ರಾಮಗಳೆಂದು ಘೋಷಣೆ: ತಹಶೀಲ್ದಾರ್ ಎನ್‌.ರಘುಮೂರ್ತಿ

 

 

 

 

ಚಳ್ಳಕೆರೆ: ತಾಲೂಕಿನ ತಳುಕು ಹೋಬಳಿಯ ಓಬಳಾಪುರ ಗ್ರಾಮ  ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಿದ್ದು  ಸಾರಿಗೆ ಸಚಿವರಾದ ಬಿ.ಶ್ರೀರಾಮುಲು ಅವರು  ದಿನಾಂಕ 30 4 2022 ರಂದು ಓಬಳಾಪುರ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳೆಂದು ಘೋಷಿಸಲಿದ್ದಾರೆ ಎಂದು ತಹಶೀಲ್ದಾರ್  ಎನ್. ರಘುಮೂರ್ತಿ ಹೇಳಿದರು.

 

 

ಓಬಳಾಪುರ ಗ್ರಾ ಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಏಳು ಗ್ರಾಮಗಳಲ್ಲಿ ಇರುವಂತಹ ಪೌತಿ ಖಾತೆ ಪೋಡಿ ಪ್ರಕರಣಗಳು ಸ್ಮಶಾನ ಸಮಸ್ಯೆ ದಾರಿ ಸಮಸ್ಯೆ ರೈತರ ಪರಿಹಾರ ಸಮಸ್ಯೆಗಳು ಸೇರಿದಂತೆ ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುವಂತಹ ಎಲ್ಲಾ ಸೌಲಭ್ಯಗಳನ್ನು ಶೇಕಡ ನೂರರಷ್ಟು ಪೂರ್ಣಗೊಳಿಸಿದ್ದು ರಂತೆ  ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಮೊಳಕಾಲ್ಮುರು  ಕ್ಷೇತ್ರದ ಶಾಸಕರಾದ ಬಿ ಶ್ರೀರಾಮುಲು ರವರು ನಾಳೆ ಸದರಿ ಗ್ರಾಮಕ್ಕೆ ಭೇಟಿ ನೀಡಿ ಏಳು ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳೆಂದು ಘೋಷಣೆ ಮಾಡಿ ಸರ್ಕಾರದಿಂದ ನೀಡಬಹುದಾದಂತಹ ಎಲ್ಲ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಿದ್ದಾರೆ. ಈ  ಭಾಗದ ಎಲ್ಲಾ ಪಲಾನುಭವಿಗಳು ಸರ್ಕಾರದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸೌಲಭ್ಯಗಳನ್ನು ಪಡೆಯಬೇಕೆಂದು ವಿನಂತಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours