ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ:ಜಿಲ್ಲಾ ನಿರ್ದೇಶಕ ದಿನೇಶ್

 

ವರದಿ : ಚಿಕ್ಕಪ್ಪನಹಳ್ಳಿ ಸೋಮು

ಹೊಸದುರ್ಗ : ಪರಿಸರ ಸಂರಕ್ಷಣೆಯಲ್ಲಿ ನಮ್ಮೆಲ್ಲರ ಹೊಣೆ ಗಾರಿಕೆ ತುಂಬಾ ಮಹತ್ವದ್ದಾಗಿದ್ದು ಪ್ರತಿಯೊಬ್ಬರೂ ಸಸಿಗಳನ್ನು ಬೆಳಸುವ ಮೂಲಕ ನಮ್ಮ ಸುತ್ತಲಿನ ಪರಿಸರ ರಕ್ಷಣೆ ಮಾಡಬೇಕು ಎಂದು ಜಿಲ್ಲಾ ನಿರ್ದೇಶಕ ದಿನೇಶ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ತಾಲೂಕಿನ ಕಸಬಾ ವಲಯದ ಬೀಸನಹಳ್ಳಿ ಕಾರ್ಯಕ್ಷೇತ್ರದ ಜ್ಞಾನಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಸಸಿ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹೊಸದುರ್ಗ ತಾಲೂಕಿನಲ್ಲಿ ಧರ್ಮಸ್ಥಳ ಯೋಜನೆ ಮೂಲಕ ವಿವಿಧ ಗ್ರಾಮಗಳಲ್ಲಿ 12 ಕಾರ್ಯಕ್ರಮ ಆಯೋಜನೆ ಮಾಡಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ 1200 ಸಸಿಗಳನ್ನು ನಾಟಿ ಮಾಡಲಾಗುವುದು ಎಂದು ತಿಳಿಸಿದರು. ಶಾಲೆ ಶಿಕ್ಷಕರು ಹಾಗೂ ಸ್ವ ಸಹಾಯ ಸಂಘದ ಸದಸ್ಯರೊಟ್ಟಿಗೆ ಶಾಲೆ ಆವರಣದಲ್ಲಿ ಸಸಿ ನಾಟಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾದ್ಯಾಯ ಶಿವಶಂಕರಯ್ಯ, ಶಿಕ್ಷಕ ಬಸವರಾಜ, ಒಕ್ಕೂಟದ ಅಧ್ಯಕ್ಷೆ ನೀಲಮ್ಮ ಹಾಗೂ ಸ್ಥಳೀಯ ರೈತರು ಮತ್ತು ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು. ಮೇಲ್ವಿಚಾರಕ ಮೋಹನ ಹೊನ್ನಿಹಳ್ಳಿ ನಿರೂಪಿಸಿದರು, ರೂಪ ಸ್ವಾಗತಿಸಿದರು.

[t4b-ticker]

You May Also Like

More From Author

+ There are no comments

Add yours