ಪರ್ಸೆಂಟೇಜ್‌ ಜನಕರೇನಾದರೂ ಇದ್ದರೆ ಕಾಂಗ್ರೆಸ್‌ನವರು:ಸಿಎಂ ಬಸವರಾಜ್ ಬೊಮ್ಮಾಯಿ

 

ದಾವಣಗೆರೆ: ಗುತ್ತಿಗೆದಾರರ‘ಟೆಂಡರ್‌ಗಳಲ್ಲಿನ ಪರ್ಸೆಂಟೇಜ್‌ ವಿಚಾರದಲ್ಲಿ ಕಾಂಗ್ರೆಸ್‌ ಸ್ನೇಹಿತರು  ತುಂಬಾ  ಆಸಕ್ತಿ ವಹಿಸುತ್ತಿರುವುದರಿಂದ ಕಾಂಗ್ರೆಸ್‌ ಕಾಲದಲ್ಲಿ ಆಗಿರುವ ಟೆಂಡರ್‌ಗಳನ್ನೂ ಸೇರಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 ನಿನ್ನೆ ಸಂಜೆ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಕಾಂಗ್ರೆಸ್‌ ನಾಯಕರು ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ನಗರದಲ್ಲಿ ಶುಕ್ರವಾರ ಮಾಧ್ಯಮ ದವರ   ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ,‘ಪರ್ಸೆಂಟೇಜ್‌ ಜನಕರೇನಾದರೂ ಇದ್ದರೆ ಕಾಂಗ್ರೆಸ್‌ನರೇ ಆಗಿದ್ದಾರೆ. ಪ್ರತಿ ಬಾರಿ ಅಧಿಕಾರಕ್ಕೆ ಬಂದಾಗಲೂ ಪರ್ಸೆಂಟೇಜ್‌ ಹೆಚ್ಚು ಮಾಡಿಕೊಳ್ಳುತ್ತ ಬಂದಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ನ ಇಬ್ಬರು ನಾಯಕರು ಪಿಸು ಮಾತನಾಡಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಅವರೇ ಪರ್ಸೆಂಟೇಜ್‌ ಪ್ರಾರಂಭಿಸಿದ್ದಾರೆ. ಈಗ ಅವರೇ ಮನವಿ ಕೊಟ್ಟಿದ್ದಾರೆ. ಇದು ಎಲ್ಲಾ ಗುತ್ತಿಗೆದಾರರಿಗೂ ಗೊತ್ತಿದೆ. ಕಾಂಗ್ರೆಸ್‌ನ ಆರೋಪ ಹಾಸ್ಯಾಸ್ಪದವಾಗಿದೆ ಎಂದರು.
[t4b-ticker]

You May Also Like

More From Author

+ There are no comments

Add yours