ಪೆಟ್ರೋಲ್, ಡಿಸೇಲ್ ಏರಿಕೆ. ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ:ಮೋದಿ ಈ ದೇಶಕ್ಕೆ ವಕ್ಕರಿಸಿರುವ ಆಧುನಿಕ ಬಸ್ಮಾಸುರ.: ವಿ.ಎಸ್.ಉಗ್ರಪ್ಪ.

 

ಚಿತ್ರದುರ್ಗ :
ಮೊಳಕಾಲೂರು :
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಮೊಳಕಾಲ್ಮೂರು ಪಟ್ಟಣದಲ್ಲಿಂದು ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು….

ಪಟ್ಟಣದ ಪಿಟಿ ಹಟ್ಟಿಯಿಂದ ಖಾಸಗಿ ಬಸ್ ನಿಲ್ದಾಣದ ವರೆಗೂ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು..

ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಂಸದ ಕಾಂಗ್ರೆಸ್ ಮುಖಂಡರಾದ ವಿಎಸ್ ಉಗ್ರಪ್ಪ ಮಾತನಾಡಿದರು…

ಮೋದಿ ಈ ದೇಶಕ್ಕೆ ವಕ್ಕರಿಸಿರುವ ಆಧುನಿಕ ಬಸ್ಮಾಸುರ..

ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ಈ ದೇಶಕ್ಕೆ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುತ್ತೇನೆ ಎಂದು ಸುಳ್ಳು ಹೇಳಿ ವೋಟು ಗಿಟ್ಟಿಸಿಕೊಂಡು ಅಧಿಕಾರಕ್ಕೆ ಬಂದವರು.

ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ಜನಸಾಮಾನ್ಯರ ಮೇಲೆ ತೀವ್ರ ಪೆಟ್ಟು ಬೀಳುತ್ತಿದೆ ಇವೆಲ್ಲವುಗಳನ್ನು ಲೆಕ್ಕಿಸದೆ ನರೇಂದ್ರಮೋದಿಯವರು ಶ್ರೀಮಂತರ ಪರವಾದ ಆಡಳಿತ ನಡೆಸುತ್ತಿದ್ದಾರೆ ಕೇಂದ್ರ ಸರ್ಕಾರದ ಯಾವ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..

ಇದೇ ವೇಳೆ ಮಾಜಿ ಶಾಸಕ ತಿಪ್ಪೇಸ್ವಾಮಿ ಮಾತನಾಡಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗಳಿಗೆ ಕತ್ತರಿ ಹಾಕಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಹಗಲು ದರೋಡೆ ನಡೆಸುತ್ತಿದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತ ನಡೆಸುತ್ತಿದ್ದರು ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು….

ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ ಕಾಂಗ್ರೆಸ್ ಮುಖಂಡರಾದ ಡಾ. ಬಿ ಯೋಗೇಶ್ ಬಾಬು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್ ಪಿರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಸಹಸ್ರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು…

[t4b-ticker]

You May Also Like

More From Author

+ There are no comments

Add yours