ಪ್ರೌಢಶಾಲಾ ವಿಭಾಗದ *ಮುಖ್ಯ ಶಿಕ್ಷಕರ ಸಂಘದ* ನೂತನ ಪದಾಧಿಕಾರಿಗಳಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ಕೆ ಅವರಿಗೆ ಮಾಲಾರ್ಪಣೆ ಮಾಡಿ ಅಭಿನಂದನೆ ಸಲ್ಲಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ್ ರವರು ನೂತನವಾಗಿ ಆಯ್ಕೆಯಾದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಚಟುವಟಿಕೆಗಳಲ್ಲಿ ಕೈಜೋಡಿಸಿ ಎಂದು ಮನವಿ ಮಾಡಿ ಜಿಲ್ಲಾ ಸರ್ಕಾರಿ ನೌಕರರ ಸಂಘ ತಮ್ಮೊಂದಿಗೆ ಸದಾ ಇರುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಂದ್ರಪ್ಪ ಉಪ ಪ್ರಾಂಶುಪಾಲರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ ಜೆ, ಗೌರವಾಧ್ಯಕ್ಷರಾದ ಶ್ರೀ ಆರ್. ನಾಗರಾಜ್. ಹಾಗೂ ಪದಾಧಿಕಾರಿಗಳು ಹಾಜರಿದ್ದರು.
[t4b-ticker]
+ There are no comments
Add yours