ರಾಜ್ಯ ಸುದ್ದಿ : ಶಾಲಾ ಫಿಸ್ ಕಟ್ಟಿಲ್ಲ ಎಂದು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ ಎಂದು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಶಿಕ್ಷಣ ಸಚಿವರು ಎಚ್ಚರಿಕೆ ರವಾನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ , ರಾಜ್ಯದ ಯಾವುದೇ ಶಾಲೆಗಳು ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡಿಲ್ಲ ಎಂದು ಹೇಳಿ, ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಬಂದ್ ಮಾಡುವಂತ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಅಲ್ಲದೇ ಹೈಕೋರ್ಟ್, ಸುಪ್ರೀಂ ಕೋರ್ಟ್ ಸೂಚನೆ ಕೂಡ ಇದೆ ಎಂದು ಎಚ್ಚರಿಸಿದರು.
ತರಗತಿ ಬಂದ್ ಮಾಡಿದ್ದರ ಬಗ್ಗೆ ಪೋಷಕರು ಕೂಡ ದೂರು ನೀಡಬಹುದು. ನನಗೆ ಇಲ್ಲವೇ ನಿಮ್ಮ ಶಾಲಾ ವ್ಯಾಪ್ತಿಯ ಬಿಇಓಗಳಿಗೆ ದೂರು ನೀಡಿದರೆ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
[t4b-ticker]
+ There are no comments
Add yours