ಬಿಜೆಪಿಗೆ ಕೆಲವರು ಉದ್ಯಮ ಮಾಡಲು ಬಂದಿದ್ದಾರೆ: ಕೆ.ಎಸ್.ಈಶ್ವರಪ್ಪ.

 

ಬೆಳಗಾವಿ,ಡಿ.೧೬- ಬಿಜೆಪಿಗೆ ಕೆಲವರು ಉದ್ಯಮಮಾಡಲು ಬಂದಿದ್ದಾರೆ.ಅಂತವರು ಇನ್ನೂ ಪಕ್ಷಕ್ಕೆ ಹೊಂದಾಣಿಕೆ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಪರೋಕ್ಷವಾಗಿ ಪಕ್ಷಕ್ಕೆ ವಲಸೆ ಬಂದು ಸಚಿವರಾಗಿರುವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೀಗಾಗಿಯೇ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಯತ್ನಿಸಿದ್ದಾರೆ. ಬಿಜೆಪಿಗೆ ಉದ್ಯಮ ಮಾಡಲು ಬಂದವರು ಬಹಳ ಕಾಲ ಪಕ್ಷದಲ್ಲಿ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಸುವರ್ಣ ಸೌಧದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಮುಂದಾದವರ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ.ಈ ಬಗ್ಗೆ ವರಿಷ್ಟರು ಯಾವ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷಕ್ಕೆ ಬಂದು ಕೆಲವರು ಉದ್ಯಮ ಮಾಡುತ್ತಿದ್ದಾರೆ. ಅಂತವರು ಹೊಂದಾಣಿಕೆ ಆಗದಿದ್ದರೆ ಪಕ್ಷದಿಂದ ಹಿಂದೆ ಸರಿಯುತ್ತಾರೆ. ಬಿಜೆಪಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಪಕ್ಷವಾಗಿದೆ. ಬಹಳಷ್ಟು ಜನರು ಬರುತ್ತಾರೆ ಎಂದರು.

[t4b-ticker]

You May Also Like

More From Author

+ There are no comments

Add yours