ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯಿಂದ ಸಹಾಯ ಹಸ್ತ:ಅಲೆಮಾರಿ, ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ
***
ಚಿತ್ರದುರ್ಗ, ಜೂನ್15:
ಚಿತ್ರದುರ್ಗ ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು.
ನಗರದ ಪತ್ರಿಕಾ ಭವನದ ಮುಂಭಾಗದಲ್ಲಿ ಮಂಗಳವಾರ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಲೆಮಾರಿ, ಕೂಲಿ ಕಾರ್ಮಿಕರಿಗೆ, ಬಡವರು ಹಾಗೂ ನಿರ್ಗತಿಕರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಮಾತನಾಡಿ, ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆ ವತಿಯಿಂದ ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ಸಹಾಯ ಹಸ್ತ ಚಾಚಿರುವುದು ಶ್ಲಾಘನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಆಡಳಿತ ಮಂಡಳಿ ಸದಸ್ಯೆ ಗಾಯತ್ರಿ ಶಿವರಾಂ, ಜಿಲ್ಲಾ ಶಾಖೆಯ ಕಾರ್ಯದರ್ಶಿ ಮಜರುಲ್ಲಾ, ನಿರ್ದೇಶಕರಾದ ಮಧುಪ್ರಸಾದ್, ಗಿರೀಶ್, ಸುರೇಶ್ ಬಾಪ್ನಾ, ಸದಸ್ಯರಾದ ಶಿವರಾಜ್, ಸುರೇಶ್ ಹಾಗೂ ಪತ್ರಕರ್ತರಾದ ನರೇನಹಳ್ಳಿ ಅರುಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಪತ್ರಿಕಾ ಭವನದ ಮುಂಭಾಗದಲ್ಲಿ ಮಂಗಳವಾರ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಲೆಮಾರಿ, ಕೂಲಿ ಕಾರ್ಮಿಕರಿಗೆ, ಬಡವರು ಹಾಗೂ ನಿರ್ಗತಿಕರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ, ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಪದಾಧಿಕಾರಿಗಳು ಇದ್ದರು.
=====
+ There are no comments
Add yours