ಮನೆ ಹಕ್ಕು ಪತ್ರ. ಕೊಡಲು 60 ಸಾವಿರ ಲಂಚ, ತಹಶೀಲ್ದಾರ್ , ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

 

 

 

ಚಿಕ್ಕಮಗಳೂರು: ಮನೆ ಹಕ್ಕು ಪತ್ರ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಶೃಂಗೇರಿ ತಹಶೀಲ್ದಾರ್ ಹಾಗೂ ಗ್ರಾಮ ಲೆಕ್ಕಿಗ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯ ಶೃಂಗೇರಿ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ಕಾವಡಿ ಗ್ರಾಮದ ಸಂಜಯ್ ಕುಮಾರ್ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಅಂಬುಜಾ, ವಿಎ ಸಿದ್ದಪ್ಪರನ್ನ ಎಸಿಬಿ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಕಳೆದ ಕೆಲವು ತಿಂಗಳಿನಿಂದಲೂ ತಹಶೀಲ್ದಾರ್ ವಿರುದ್ಧ ಭಾರೀ ಅಕ್ರಮ ಎಸಗಿರುವ ಆರೋಪ ಕೇಳಿಬರುತ್ತಿತ್ತು. ಮನೆ ಹಕ್ಕು ಪತ್ರ-ಅಕ್ರಮವಾಗಿ ಖಾತೆಗಳನ್ನ ಮಾಡಿಕೊಡಲು ಲಂಚ ಪಡೆಯುತ್ತಿದ್ದಾರೆ. ಹಣ ನೀಡದಿದ್ದರೆ ಯಾವ ಕೆಲಸ ಕೂಡ ಆಗೋದಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಇದೀಗ ಎಸಿಬಿ ಬಲೆಗೆ ಬೀಳುವ ಮೂಲಕ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಸಂಜಯ್ ಎಂಬುವರಿಗೆ ಮನೆಯ ಹಕ್ಕು ಪತ್ರ ನೀಡಲು 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮೊದಲ ಕಂತಿನ 25 ಸಾವಿರ ಹಣ ಪಡೆಯುವಾಗ ತಹಶೀಲ್ದಾರ್, ಗ್ರಾಮ ಲೆಕ್ಕಿಗ ಟ್ರ್ಯಾಪ್ ಆಗಿದ್ದಾರೆ.

[t4b-ticker]

You May Also Like

More From Author

+ There are no comments

Add yours