ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಇನ್ನಿಲ್ಲ

 

ಕೋಲಾರ: ಹಿರಿಯ ಕಾಂಗ್ರೆಸ್ ನಾಯಕ, ಮಾಜೀ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ‌( 96) ನಿಧನರಾಗಿದ್ದಾರೆ.

ವಯೋಸಹಜತೆಯಿಂದ ಮತ್ತು  ಅನಾರೋಗ್ಯದಿಂದ ಹಲವು ದಿನಗಳಿಂದ ಬಳಲುತ್ತಿದ್ದ ಆರ್.ಎಲ್.ಜಾಲಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1996 ರಲ್ಲಿ ಹೆಚ್.ಡಿ.ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರದ ದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸಿದ್ಧರಾಮಯ್ಯ ಅವರು ಅಹಿಂದ ಚಳವಳಿಯನ್ನು ಸಂಘಟಿಸಲು ಮುಂದಾದ ಕಾಲದಲ್ಲಿ ಅವರಿಗೆ ಬೆನ್ನೆಲುಬಾಗಿ ನಿಂತಿದ್ದರು.

ಜಾಲಪ್ಪ ಅವರ ನಿಧನಕ್ಕೆ ರಾಜ್ಯದೆಲ್ಲೆಡೆಯಿಂದ ಸಂತಾಪ ವ್ಯಕ್ತವಾಗಿದೆ.

[t4b-ticker]

You May Also Like

More From Author

+ There are no comments

Add yours