ಮಾಜಿ ಸಚಿವ ಎಸ್.ಆರ್. ಮೋರೆ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ

 

 

*ಬೆಂಗಳೂರು:*

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್. ಮೋರೆ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

‘ಎಸ್.ಆರ್. ಮೋರೆ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ನಮ್ಮ ಆತ್ಮೀಯ ಸಹೋದ್ಯೋಗಿ. ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ.

ನಾಲ್ಕು ಬಾರಿ ಶಾಸಕರಾಗಿದ್ದ ಮೋರೆ ಅವರು ಎಸ್ .ಬಂಗಾರಪ್ಪ ಹಾಗೂ ಧರಂಸಿಂಗ್ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಭಿವೃದ್ಧಿ ಕಾರ್ಯಗಳ ಮೂಲಕ ಪ್ರಭಾವಿ ನಾಯಕರಾಗಿದ್ದ ಮೋರೆ ಅವರು ಪಕ್ಷಕ್ಕೆ ಅಪಾರ ಸೇವೆ ಸಲ್ಲಿಸಿದ್ದರು.

ಮೋರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಭಗವಂತ ಕರುಣಿಸಲಿ’ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours