ಬೆಂಗಳೂರು, ಜೂನ್ : ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿರುವ ಎಲ್ಲಾ ಪ್ರವಾಸಿ ಮಾರ್ಗದರ್ಶಕರಿಗೆ ಕೋವಿಡ್ ಪರಿಹಾರವಾಗಿ 5 ಸಾವಿರ ರೂಪಾಯಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು ಶೀಘ್ರವೇ ಈ ವಿಷಯದ ಕುರಿತು ಸರ್ಕಾರದಿಂದ ಆದೇಶ ಬರಲಿದೆ ಎಂದರು.
ಪ್ರವಾಸೋದ್ಯಮ ಇಲಾಖೆಯಲ್ಲಿ 384 ಪ್ರವಾಸಿ ಗೈಡ್ಗಳು ನೋಂದಣಿ ಮಾಡಿಕೊಂಡಿದ್ದಾರೆ. ಅವರಿಗೆ ಕೋವಿಡ್ ಸಂದರ್ಭದಲ್ಲಿ ನೆರವಾಗಲು ನಿರ್ಧರ ಮಾಡಿದ್ದೇವೆ. ಪ್ರತಿಯೊಬ್ಬ ಗೈಡ್ ಗಳಿಗೆ ಐದು ಸಾವಿರ ರೂಪಾಯಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಪಾಯಿಗಳನ್ನು ನೀಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ,” ಎಂದು ಸಚಿವ ಯೋಗೇಶ್ವರ್ ಮಾಹಿತಿ ನೀಡಿದರು.
[t4b-ticker]
+ There are no comments
Add yours