ರಾಜ್ಯ ಬಿಜೆಪಿಯಲ್ಲಿ ಮನೆ ಮಾಡಿದ ಸಂಭ್ರಮ, ಪರಸ್ಪರ ಸಿಹಿ ಹಂಚಿಕೊಂಡ ನಾಯಕರು

 

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪೂರ್ಣ ಚಿತ್ರಣ  ಕೆಲವೇ ಗಂಟೆಗಳಲ್ಲಿ  ಸಿಗಲಿದ್ದು, ಸದ್ಯದ ಬೆಳವಣಿಗೆಯಲ್ಲಿ ಪಂಜಾಬ್​ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಸಚಿವ ಬಿ.ಶ್ರೀರಾಮುಲು, ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

ಮೈಸೂರು ಬಿಜೆಪಿ ಕಚೇರಿ ಮುಂಭಾಗ ಗೋವಿಗೆ ಪುಷ್ಪಾರ್ಚನೆ ಮಾಡಿದ ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಭಾವಚಿತ್ರ ಹಿಡಿದು ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು. ಹೀಗೆ ರಾಜ್ಯಾದ್ಯಂತ ಬಿಜೆಪಿ ಸಂಭ್ರಮಾಚಾರಣೆ ಮಾಡುತ್ತಿದೆ.

[t4b-ticker]

You May Also Like

More From Author

+ There are no comments

Add yours