*
ಹೊಸದುರ್ಗ ತಾಲ್ಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ರಾತ್ರಿ ಅಡಿಕೆ ತೋಟಗಳಿಗೆ ನುಗ್ಗಿ ಅಡಿಕೆ ಮರಗಳಲ್ಲಿಯಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಅಡಿಕೆಯನ್ನು ಕಳ್ಳರು ಕಿತ್ತು ಕದ್ದೊಯ್ದಿದ್ದು:ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ*..
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ನಿನ್ನೆ ಶುಕ್ರವಾರ ಮಧ್ಯರಾತ್ರಿ 2 ಗಂಟೆ ಸರಿ ಸುಮಾರಿಗೆ ಗ್ರಾಮದ ನಿವಾಸಿ ಜಯಪ್ಪ ತಂದೆ ಸಿದ್ದಪ್ಪ ಎಂಬುವವರ ಅಡಿಕೆ ತೋಟಗಳಿಗೆ ನುಗ್ಗಿದ ಕಳ್ಳರು 800 ಅಡಿಕೆ ಮರಗಳಲ್ಲಿದ್ದ ಸುಮಾರು 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಅಡಿಕೆ ಕಾಯಿ ಕೊಯ್ದು ಕದ್ದು ಪರಾರಿಯಾಗಿದ್ದಾರೆ,ಇದರಿಂದಾಗಿ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ.ಶೀಘ್ರವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇತ್ತ ಗಮನಹರಿಸಿ ಅಡಿಕೆ ಕಳ್ಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ರೈತರು ಇಂದು ಒತ್ತಾಯಿಸಿದರು.
[t4b-ticker]
+ There are no comments
Add yours