ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ: ಸಿಎಂ ಯಡಿಯೂರಪ್ಪ

 

ಬೆಂಗಳೂರು, ಮೇ 30: ರಾಜ್ಯದಲ್ಲಿ ಜೂನ್ 7ರ ನಂತರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ. ಜೂನ್ 5 ಅಥವಾ 6 ರಂದು ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜನ ಸಹಕರಿಸಿದರೆ ಲಾಕ್ ಡೌನ್ ವಿಸ್ತರಿಸುವ ಅಗತ್ಯವಿಲ್ಲ.‌ ಕೆಲವು ಜಿಲ್ಲೆಗಳಲ್ಲಿ ಕೊರೋನ ಸೋಂಕು ಕಡಿಮೆಯಾಗಿಲ್ಲ. ಈ ಬಗ್ಗೆ ತಜ್ಞರು, ಸಚಿವರ ಜತೆ‌ ಸಮಾಲೋಚನೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಣೆ ನೀಡಿದರು.

[t4b-ticker]

You May Also Like

More From Author

+ There are no comments

Add yours