ವದ್ದಿಕೆರೆ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ: ಏ.18ರಂದು ಬ್ರಹ್ಮರಥೋತ್ಸವ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಏ.12:
ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ವದ್ದೀಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಏಪ್ರಿಲ್ 15 ರಿಂದ 20ರವರೆಗೆ ನಡೆಯಲಿದೆ.
ಏಪ್ರಿಲ್ 15ರ ರಾತ್ರಿ 8 ಗಂಟೆಗೆ ಕಂಕಣಧಾರಣೆ, 16ರಂದು ರಾತ್ರಿ 7 ಗಂಟೆಗೆ ಅಗ್ನಿಕುಂಡ, 17ರಂದು ರಾತ್ರಿ 8 ಗಂಟೆಗೆ ಚಿಕ್ಕರಥೋತ್ಸವ, 18ರಂದು ಮಧ್ಯಾಹ್ನ 4.30ಕ್ಕೆ ಬ್ರಹ್ಮರಥೋತ್ಸವ, 19ರಂದು ಉಂಡೆ, ಮಂಡೆ, ಸಿದ್ಧಭುಕ್ತಿ, 20ರಂದು ಕಿರುಬಾನ, ವಸಂತೋತ್ಸವ ಮತ್ತು ಸಂಜೆ 6 ಗಂಟೆಗೆ ಕಂಕಣ ವಿಸರ್ಜನೆ ಕಾರ್ಯಕ್ರಮಗಳು ನೆರವೇರಲಿವೆ ಎಂದು ಹಿರಿಯೂರು ತಹಶೀಲ್ದಾರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours