ವಸತಿ ಯೋಜನೆ: ಅರ್ಜಿ ಆಹ್ವಾನ ಮೇ 18 ಲಾಸ್ಟ್ ಡೇಟ್

 

 

 

 

ವಸತಿ ಯೋಜನೆ: ಅರ್ಜಿ ಆಹ್ವಾನ
ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.13 :
2021-22ನೇ ಸಾಲಿನ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿ-09, ಪರಿಶಿಷ್ಟ ಪಂಗಡ-03 ಒಟ್ಟು 12 ಹಾಗೂ ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗ 33 ಮತ್ತು ಅಲ್ಪಸಂಖ್ಯಾತ 5 ಒಟ್ಟು 38 ಅರ್ಹ ಫಲಾನುಭವಿಗಳಿಗೆ ರಾಜೀವ್ ಗಾಂಧಿ ನಿಗಮ ನಿಯಮಿತ ಅವರು ಗುರಿ ನಿಗಧಿಪಡಿಸಿ ಆದೇಶಿಸಿರುವುದರಿಂದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಮೇ 18ರ ಒಳಗಾಗಿ ಅರ್ಜಿಗಳನ್ನು ಕಚೇರಿಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ವಸತಿ ಶಾಖೆಯನ್ನು ಸಂಪರ್ಕಿಸಬೇಕು ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours