ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನ.

 

ಚಿತ್ರದುರ್ಗ,ಸೆಪ್ಟೆಂಬರ್01:
2021-22 ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ನಂತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿಕಲಚೇತನ ವಿದ್ಯಾರ್ಥಿಗಳು ಕಡ್ಡಾಯವಾಗಿ ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್‍ನಲ್ಲಿ https://ssp.postmatric.karnataka.gov.in./2021/ನಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೋರಿದೆ.
ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾಮೀಣ, ನಗರ, ವಿವಿದೊದ್ದೇಶ ಪುನರ್ವವಸತಿ ಕಾರ್ಯಕರ್ತರಲ್ಲಿ ಅರ್ಜಿ ನೀಡಬೇಕು.
ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಎಂಆರ್‍ಡಬ್ಲ್ಯೂ ಎನ್. ಮೈಲಾರಪ್ಪ-9880821934, ಚಳ್ಳಕೆರೆ ತಾಲ್ಲೂಕು ಪಂಚಾಯತ್ ಎಂಆರ್‍ಡಬ್ಲ್ಯೂ ನರಸಿಂಹ ಮೂರ್ತಿ-9611266930, ಹಿರಿಯೂರು ತಾಲ್ಲೂಕು ಪಂಚಾಯತ್ ಎಂಆರ್‍ಡಬ್ಲ್ಯೂ ಕೆ.ಬಸವರಾಜ್-9902888901, ಹೊಳಲ್ಕೆರೆ ತಾಲ್ಲೂಕು ಪಂಚಾಯತ್ ಎಂಆರ್‍ಡಬ್ಲ್ಯೂ ರಾಘವೇಂದ್ರ-9740030227, ಹೊಸದುರ್ಗ ತಾಲ್ಲೂಕು ಪಂಚಾಯತ್ ಎಂಆರ್‍ಡಬ್ಲ್ಯೂ ಫಯಾಜ್ ಅಹಮ್ಮದ್-9741829990, ಮೊಳಕಾಲ್ಮೂರು ತಾಲ್ಲೂಕು ಪಂಚಾಯತ್ ಎಂಆರ್‍ಡಬ್ಲ್ಯೂ ದಾದಾಪೀರ್-9742725576 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ ಚಿತ್ರದುರ್ಗ ದೂರವಾಣಿ ಸಂಖ್ಯೆ:08194-235284ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours