ವಿಧಾನ ಪರಿಷತ್ ಚುನಾವಣೆ:ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ನಾಮಪತ್ರ ಸಲ್ಲಿಕೆ.

 

ಚಿತ್ರದುರ್ಗ: ಚಿತ್ರದುರ್ಗ-ದಾವಣಗೆರೆ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಕೆ.ಎಸ್.ನವೀನ್ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಚಿವರು , ಶಾಸಕರು, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆ ಸದಸ್ಯರ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ  ತೆರದ ವಾಹನದಲ್ಲಿ  ಗಾಂಧಿ ಸರ್ಕಲ್, ಎಸ್ ಬಿಐ ವೃತ್ತ , ಪ್ರವಾಸಿ ಮಂದಿರ ಮುಂಭಾಗದಿಂದ ಜಿಲ್ಲಾಧಿಕಾರಿ ವೃತ್ತ ತಲುಪಿತು. ನಂತರ ಜಿಲ್ಲಾಧಿಕಾರಿ ಕಚೇರಿ ಒಳಗೆ ತೆರಳಿ ನಾಮಪತ್ರ ಸಲ್ಲಿಸಿದರು

ಈ  ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಮುರಳಿ, ದಾವಣಗೆರೆ ಜಿಲ್ಲಾ ಘಟಕದ ವೀರೆಶ್ ಹನಗವಾಡಿ , ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಜಿಲ್ಲಾ ಉ‌ಸ್ತುವಾರಿ ಸಚಿವ ಶ್ರೀರಾಮುಲು, ದಾವಣಗೆರೆ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ,  ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಎಂ ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್, ಗೂಳಿಹಟ್ಟಿ ಶೇಖರ್  ವಿಧಾನ ಪರಿಷತ್ ಸದಸ್ಯರಾದ ಎ. ನಾರಾಯಣಸ್ವಾಮಿ,  ಚಿದಾನಂದ ಗೌಡ ,ಸೇರಿದಂತೆ ಪಕ್ಷದ ಪಧಾದಿಕಾರಿಗಳು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು

[t4b-ticker]

You May Also Like

More From Author

+ There are no comments

Add yours