ಶರಣಶ್ರೀ ಡಾ. ಈಶ್ವರ ಮಂಟೂರ ಅವರ ಅಗಲುವಿಕೆ ತುಂಬಲಾರದ ನಷ್ಟ :ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

 

 

 

 

ಶರಣಶ್ರೀ ಡಾ. ಈಶ್ವರ ಮಂಟೂರ ಅವರ ಅಗಲುವಿಕೆಯಿಂದ
ಸಾಹಿತ್ಯ ಸಂಗೀತ ಜ್ಞಾನ ಕ್ಷೇತ್ರಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ರೆಡ್ಡಿ ಗುರುಪೀಠದ ಶ್ರೀ ವೇಮನಾನಂದ ಸ್ವಾಮೀಜಿ ಸಂತಾಪ ಸೂಚಿಸಿದರು.

 

 

ಬಸವ ಜ್ಞಾನ ಗುರುಕುಲದ ಅಂತಿಮ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಶರಣಶ್ರೀ ಡಾ. ಈಶ್ವರ ಮಂಟೂರ ಅವರು ಕವಿಯಾಗಿ, ಚಿಂತಕರಾಗಿ, ಅನುಭಾವಿ ಪ್ರವಚನಕಾರರಾಗಿ, ಸಾಹಿತಿಗಳಾಗಿ, ಸಮಾಜೋದ್ಧಾರ್ಮಿಕ ಕಾರ್ಯಗಳನ್ನು ಮಾಡುತ್ತ ಮುನ್ನಡೆದಿದ್ದರು. ಕಲ್ಲು ಮನಸ್ಸಿನ ಹೃದಯಗಳನ್ನು ಹೂವಿನಂತೆ ಅರಳಿಸುವ ಕ್ರೂರಿಗಳ ಭಾವದಲ್ಲಿ ದಯೆಯನ್ನು ತುಂಬುವ, ದ್ವೇಷಿಗಳ ಮನದಲ್ಲಿ ಪ್ರೀತಿಯ ಹಣತೆಯನ್ನು ಹಚ್ಚುವ, ವಿನಯಗುಣ ಸರಳ ಸಂಪನ್ನ ಶರಣರಾದ ಇವರ ತ್ಯಾಗ, ಸೇವೆ ಅನುಪಮವಾದುದು ಎಂದು ಸಂತಾಪ ವ್ಯಕ್ತಪಡಿಸಿದರು.

[t4b-ticker]

You May Also Like

More From Author

+ There are no comments

Add yours